ಒಂದು ಕಡೆ ನಮ್ಮ ಸಾಂಪ್ರದಾಯಿಕ ಶತ್ರು ಪಾಕಿಸ್ತಾನ ಸೇರಿದಂತೆ ವಿಶ್ವದ ಬಹುತೇಕ ಎಲ್ಲಾ ದೇಶಗಳು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸುತ್ತಿವೆ. ಸಿಂಧನೂರು: ಒಂದು ಕಡೆ ನಮ್ಮ ಸಾಂಪ್ರದಾಯಿಕ ಶತ್ರು ಪಾಕಿಸ್ತಾನ ಸೇರಿದಂತೆ ವಿಶ್ವದ ಬಹುತೇಕ ಎಲ್ಲಾ ದೇಶಗಳು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸುತ್ತಿವೆ.
ಆದರೆ ನಮ್ಮ ದೇಶದ ಕೆಲವು ನಾಯಕರು ನಮ್ಮ ಪ್ರಧಾನಿಯನ್ನು ಅವಮಾನಿಸಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸಿಂಧನೂರಿನಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿಗೆ ಸ್ವಾಗತ ಕೋರಿದ ಈಶ್ವರಪ್ಪ, ಕೆಲವು ಪಾಕಿಸ್ತಾನಿ ನಾಯಕರು ತಮ್ಮ ದೇಶದಲ್ಲಿ ಮೋದಿ ಶೈಲಿಯ ನಾಯಕತ್ವಕ್ಕಾಗಿ ಬಹಿರಂಗ ಬೇಡಿಕೆ ಇಟ್ಟಿದ್ದಾರೆ, ಆದರೆ ನಮ್ಮಲ್ಲಿ ಮೋದಿ ಅವರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತ ಪಡಿಸಿದರು. ಬಿಜೆಪಿ ಸರ್ಕಾರ ಮತಾಂತರ ತಡೆ ಕಾಯ್ದೆ, ಗೋಹತ್ಯೆ ತಡೆ ಕಾಯ್ದೆ ತಂದಿದೆ. ಆದರೆ ಈಗ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಈ ಕಾಯ್ದೆಗಳನ್ನು ಹಿಂಪಡೆದು ಬಜರಂಗದಳದ ಮೇಲೆ ನಿಷೇಧ ಹೇರುವುದಾಗಿ ಹೇಳುತ್ತಿದೆ . ಮತಾಂತರ ತಡೆ ಕಾಯ್ದೆ ಮತ್ತು ಗೋಹತ್ಯೆ ತಡೆ ಕಾಯ್ದೆಯನ್ನು ಹಿಂಪಡೆಯುವ ಸರ್ಕಾರ ನಿಮಗೆ ಬೇಕೇ ಎಂದು ಅವರು ಜನರನ್ನು ಕೇಳಿದರು. ತಮ್ಮ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಗೊತ್ತಿದ್ದರೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ ಎಂದು ಈಶ್ವರಪ್ಪ ಲೇವಡಿ ಮಾಡಿದರು.